ಸುದ್ಧಿಕನ್ನಡ ವಾರ್ತೆ
ಪಣಜಿ: ಉತ್ತರ ಗೋವಾದ ಪ್ರಸಿದ್ಧ ಹರ್ಮಲ್ ಬೀಚ್‍ನ ಖಲ್ಚವಾಡಾ ಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ 6 ರಿಂದ 7 ಖಾಸಗಿ ಶಾಕ್ಸ ಗುಡಿಸಲುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಉದ್ಯಮಿಗಳು ಸುಮಾರು 15-20 ಲಕ್ಷ ರೂಪಾಯಿಗಳಷ್ಟು ನಷ್ಟ ಅನುಭವಿಸಿದ್ದಾರೆ. ಪ್ರವಾಸಿ ಋತುವಿನ ಉತ್ತುಂಗದಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳೀಯ ಉದ್ಯಮಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಶಾರ್ಟ್ ಸಕ್ರ್ಯೂಟ್‍ನಿಂದ ಇದು ಸಂಭವಿಸಿರಬಹುದು ಎಂದು ಊಹಿಸಲಾಗುತ್ತಿದೆ.

ಬೆಳಗಿನ ಜಾವ 3:20 ರ ಸುಮಾರಿಗೆ ಸ್ಥಳೀಯ ನಾಗರಿಕರು ಸ್ಥಳೀಯ ಶಾಸಕರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದರು. ಘಟನೆಯ ಗಂಭೀರತೆಯನ್ನು ಅರಿತ ಶಾಸಕರು ಕೇವಲ 15 ನಿಮಿಷಗಳಲ್ಲಿ, ಅಂದರೆ ಬೆಳಗಿನ ಜಾವ 3:35 ಕ್ಕೆ ಸ್ಥಳಕ್ಕೆ ತಲುಪಿದರು. ಅವರು ತಕ್ಷಣ ಅಗ್ನಿಶಾಮಕ ದಳ ಮತ್ತು ಪೆÇಲೀಸ್ ಆಡಳಿತವನ್ನು ಸಂಪರ್ಕಿಸಿ ಪರಿಹಾರ ಕಾರ್ಯವನ್ನು ಚುರುಕುಗೊಳಿಸಿದರು. ಅವರು ಘಟನೆಯ ಬಗ್ಗೆ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೆ ಮಾಹಿತಿ ನೀಡಿದರು. ಸ್ಥಳೀಯ ನಾಗರಿಕರು, ಶಾಸಕರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಳಿಗ್ಗೆ 5 ಗಂಟೆಯ ಹೊತ್ತಿಗೆ ಎಲ್ಲಾ ಪ್ರಯತ್ನಗಳನ್ನು ಮಾಡಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಗುಡಿಸಲಿನಲ್ಲಿದ್ದ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಇತರ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದರಿಂದ ಉದ್ಯಮಿಗಳಿಗೆ ಭಾರಿ ಆರ್ಥಿಕ ನಷ್ಟವಾಗಿದೆ. ಬೆಂಕಿಯ ಕಾರಣದ ಬಗ್ಗೆ ಪೆÇಲೀಸರು ಮತ್ತು ಅಗ್ನಿಶಾಮಕ ಇಲಾಖೆ ಈಗ ಸಂಪೂರ್ಣ ತನಿಖೆ ನಡೆಸುತ್ತಿದೆ.