ಸುದ್ದಿ ಕನ್ನಡ ವಾರ್ತೆ
ಶಿರಸಿ ಹಾಗೂ ಕುಮಟಾ ಸಂಪರ್ಕಿಸುವ ಹೆದ್ದಾರಿ ದೇವಿ ಮನೆ ಘಾಟ್ ನಲ್ಲಿ ಶುಕ್ರವಾರ ಭಾರಿ ಪ್ರಮಾಣದ ಗುಡ್ಡ ಕುಸಿತ ಉಂಟಾಗಿದೆ. ಈ ಗುಡ್ಡ ಕುಸಿತದ ಸಂದರ್ಭದಲ್ಲಿ ಬೈಕ್ ಸವಾರ ಅದೃಷ್ಟವಶಾತ್ ಪಾರಾಗಿದ್ದಾನೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರಂಭವಾಗಿದೆ. ಮಳೆ ಆರಂಭವಾಗುತ್ತಿದ್ದಂತೆಯೇ ಗುಡ್ಡ ಕುಸಿತದ ನೀತಿಯು ಎದುರಾಗಿದೆ. ದೇವಿ ಮನೆ ಘಾಟ್ ನಲ್ಲಿ ಶುಕ್ರವಾರ ಗುಡ್ಡ ಕುಸಿತದ ಸಂದರ್ಭದಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರಿನ ಮೇಲೆ ಮರ ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈತನ ಬೈಕ್ ಗೆ ಹಾನಿ ಉಂಟಾಗಿದೆ.
ಭಾರಿ ಪ್ರಮಾಣದ ಮಣ್ಣು ಮತ್ತು ಮರ ಗಿಡಗಳು ಈ ಗುಡ್ಡ ಕುಸಿತದಿಂದ ರಸ್ತೆಯ ಮೇಲೆ ಬಿದ್ದಿದ್ದರಿಂದ ಕೆಲಸ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ತೆರವು ಕಾರ್ಯಾಚರಣೆಯ ನಂತರ ವಾಹನ ಸಂಚಾರ ಸುಗಮಗೊಂಡಿದೆ.
