ಸುದ್ದಿ ಕನ್ನಡ ವಾರ್ತೆ

ಶಿರಸಿ: ಕಳೆದ‌ 2023 24 ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆಯು ರೈತರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಮಾ ಪರಿಹಾರ ನೀಡುವ ಕುರಿತು ಕೇಂದ್ರ ಸರಕಾರಕ್ಕೆ ಕ್ಷೇಮ‌ ವಿಮಾ ಕಂಪನಿ ಪುನರ್ ಪರಿಶೀಲನಾ ಅರ್ಜಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಿಂದೆ ಉತ್ತರ ಕನ್ನಡ ಜಿಲ್ಲೆಗೆ ಹವಾಮಾನ‌ ಆಧರಿತ ಬೆಳೆ ವಿಮೆ ಬಂದಿಲ್ಲ ಎಂದು ಕೇಂದ್ರ ಸರಕಾರದಿಂದ ಕ್ಷೇಮ ಜನರಲ್ ಇನ್ಸೂರೆನ್ಸ್ ಕಂಪನಿಗೆ ಒಂದು ವಾರದಲ್ಲಿ ಹಣವನ್ನು ರೈತರ ಖಾತೆಗೆ ಜಮಾ ಮಾಡಲು ಆದೇಶ ನೀಡಿತ್ತು. ಆದರೆ, ಈ ಆದೇಶವನ್ನು ಪುನರ್ ಪರಿಶೀಲನೆ ಮಾಡಲು ಕ್ಷೇಮ ಇನ್ಸೂರೆನ್ಸ್ ಕಂಪನಿಯವರು ಪುನಃ ಸಲ್ಲಿಸಿದ್ದು ಇದರ ಬಗ್ಗೆ ಕೇಂದ್ರ ಸರ್ಕಾರ ಪರಾಮರ್ಶಿಸಿ ಕ್ಷೆಮಾ ಕಂಪನಿಯವರ ಬೇಡಿಕೆಯನ್ನು ತಿರಸ್ಕರಿಸಿದೆ.

ವಿಮಾ ಪರಿಹಾರ ನೀಡಲು ಇನ್ಸೂರೆನ್ಸ್ ಕಂಪನಿಯವರು ಕರಾರಿನಂತೆ ಬಾಧ್ಯಸ್ಥರಿದ್ದು ಈ ಮೊದಲು ಅಂಕಿ ಅಂಶಗಳ ಬಗ್ಗೆ ಯಾವುದೇ ತಕರಾರು ಸಲ್ಲಿಸದೆ ಈಗ ವಿಮಾ ಪರಿಹಾರವನ್ನು ತಿರಸ್ಕರಿಸಲು ಆಗುವುದಿಲ್ಲ. ಅಲ್ಲದೆ ಕರ್ನಾಟಕ ರಾಜ್ಯ ಸರ್ಕಾರ ಹೇಳಿರುವಂತೆ ಮುಖ್ಯ ಹವಾಮಾನ ಮಾಪನ ಕೇಂದ್ರಗಳ ವರದಿ ಅಲಭ್ಯವಿದ್ದಲ್ಲಿ ದೃಢೀಕರಣ ಹವಾಮಾನ ಮಾಪನ ಕೇಂದ್ರಗಳ ದಾಖಲೆಯನ್ನು ಆಧರಿಸಬೇಕು ಎಂದು ಟೆಂಡರ್ ನೋಟಿಫಿಕೇಶನ್ ನಲ್ಲಿ ತಿಳಿಸಲಾಗಿತ್ತು. ಮತ್ತು ಕೇಂದ್ರ ಸರ್ಕಾರ ಈ ಕುರಿತು ಈಗಾಗಲೇ ವಿಮಾ ಪರಿಹಾರವನ್ನು ತಕ್ಷಣ ನೀಡಲು ಇನ್ಸೂರೆನ್ಸ್ ಕಂಪನಿಯವರಿಗೆ ಆದೇಶಿಸಿದ್ದನ್ನು ಉಲ್ಲೇಖಿಸಿ ಪುನಃ ಆದೇಶವನ್ನು ಮಾ.೧೭ರಂದು ಮಾಡಿದೆ. ಇಂದಿನಿಂದ ಏಳು ದಿನದ ಒಳಗಾಗಿ ಯಾವುದೇ ವಿಳಂಬ ಮಾಡದೆ ಅತ್ಯಂತ ಪ್ರಮುಖ ವಿಷಯ ಎಂದು ಪರಿಗಣಿಸಿ ವಿಮಾ ಹಣವನ್ನು ರೈತರಿಗೆ ನೀಡತಕ್ಕದ್ದು ಇದಕ್ಕೆ ತಪ್ಪಿದಲ್ಲಿ ವಿಮಾ ಕಂಪನಿ ಮೇಲೆ ಆಡಳಿತಾತ್ಮಕ ಕ್ರಮ ಮತ್ತು ಹಣಕಾಸು ದಂಡವನ್ನು ವಿಧಿಸಲಾಗುವುದು ಎಂದು ಕೇಂದ್ರ ಸರಕಾರವು ಇನ್ಸೂರೆನ್ಸ್ ಕಂಪನಿಯವರಿಗೆ ಆದೇಶ ಮಾಡಿದೆ. ಈ ಕುರಿತು ಕರ್ನಾಟಕ ರಾಜ್ಯ ಸರಕಾರಕ್ಕೂ ಆದೇಶವನ್ನು ನೀಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಾರ್ಯಾಲಯ ತಿಳಿಸಿದೆ.

ಇಂದು ಸಂಸದರಾದ ಕಾಗೇರಿ ಅವರು ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿ ವಿಮಾ ಪರಿಹಾರದ ವಿಳಂಬದ ಬಗ್ಗೆ ಕ್ರಮ ಕೈಗೊಳ್ಳಲು ಅಗ್ರಹಿಸಿದ್ದನ್ನು ಪರಿಗಣಿಸಿ ತಕ್ಷಣ ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿದೆ ಈ ಕುರಿತು ಪ್ರತಿ ಹಂತದಲ್ಲಿಯೂ ಕಾಗೇರಿಯವರು ಪರಿಶ್ರಮ ವಹಿಸುತ್ತಿರುವುದರಿಂದ ಇನ್ಸೂರೆನ್ಸ್ ಕಂಪನಿಯವರು ನೀಡಬೇಕಾದ ಹಣವನ್ನು ರೈತರಿಗೆ ಜಮಾ ಮಾಡುತ್ತಾರೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.