ಸುದ್ದಿ ಕನ್ನಡ ವಾರ್ತೆ

ಶಿರಸಿ:ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಕುಳುವೆ ಮಂಡಲವು ಇತ್ತೀಚಿಗೆ ಶಿರಸಿ ತಾಲೂಕಿನ ಕುಳುವೆಯಲ್ಲಿ ಆಯೋಜಿಸಿದ್ದ ವಿಜಯದಶಮಿ ಉತ್ಸವದಲ್ಲಿ, ಮಾನ್ಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪಾಲ್ಗೊಂಡರು.

​ಸಂಘದ ಕಾರ್ಯಕ್ರಮದ ಸಂಪ್ರದಾಯದಂತೆ ಸಂಸದರು ಗಣವೇಷ (ಸಂಘದ ಸಮವಸ್ತ್ರ) ಧರಿಸಿ ಉತ್ಸವದಲ್ಲಿ ಭಾಗವಹಿಸಿದ್ದು, ವಿಶೇಷವಾಗಿತ್ತು.
ಈ ಮೂಲಕ ಅವರು ಸಂಘದ ನಿಷ್ಠಾವಂತ ಸ್ವಯಂಸೇವಕರಾಗಿ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಸ್ವಯಂಸೇವಕರು, ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘವು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.