ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ,ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಶೈಕ್ಷಣಿಕ ಜಿಲ್ಲೆ ಶಿರಸಿ(ಉ.ಕ). ತಾಲೂಕಿನ ರಾಮನಗರ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹನುಮಾನಲೇನ್ ಶಾಲೆಯಲ್ಲಿ ಸರ್ಕಾರದ ಸುತ್ತೋಲೆ ಅನ್ವಯ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೋಷಕರ- ಶಿಕ್ಷಕರ ಮಹಾಸಭೆಯು ಯಶಸ್ವಿಯಾಗಿ ಸಂಪನ್ನಗೊಂಡಿತು.
ಕಾರ್ಯಕ್ರಮದ ಮೊದಲು ಶಾಲೆಯ ಮಕ್ಕಳಿಂದ ಶಾಲಾ ಪರಿಸರದ ಪ್ರಮುಖ ಬೀದಿಗಳಲ್ಲಿ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು, ಶಿಕ್ಷಕರು,ಪೋಷಕರು ಹೆಜ್ಜೆ ಹಾಕಿದರು.ಮೆರವಣಿಗೆಯ ಮೂಲಕ ಬಂದ ಮಕ್ಕಳನ್ನು ಶಿಕ್ಷಕರು ಹೂವನ್ನು ಹಾಕಿ ಸ್ವಾಗತಿಸಿದರು.ನಂತರ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ,ಉಪಾಧ್ಯಕ್ಷೆ,ಸರ್ವ ಸದಸ್ಯರನ್ನು ಹೂವನ್ನು ನೀಡುವ ಮೂಲಕ ಸ್ವಾಗತಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳ ಪ್ರಾರ್ಥನೆಯ ಮೂಲಕ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕರಾದ ಮಂಜುನಾಥ ಕೂಟಬಾಗಿ ಗಣ್ಯರ ಜೊತೆ ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲರನ್ನು ಸ್ವಾಗತಿಸಿದರು.
ಎಲ್ಲರಿಗೂ ಸಂವಿಧಾನದ ಪೀಠಿಕೆಯನ್ನು ಓದಿಸಲಾಯಿತು.
ಮಕ್ಕಳ ದಿನಾಚರಣೆಯ ನಿಮಿತ್ತ ಗಣ್ಯರ ಉಪಸ್ಥಿತಿಯಲ್ಲಿ ಮಕ್ಕಳು,ಶಿಕ್ಷಕರು,ಪಂಡಿತ ಜವಹರಲಾಲ ನೆಹರುರವರ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ,ಪುಷ್ಪ ನಮನ ಸಲ್ಲಿಸಿದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸಚಿಕುಮಾರ ನಾಯರ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ವಿನಂತಿ ಸೋಲಯೇಕರ, ಸದಸ್ಯರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಪೋಷಕರ- ಶಿಕ್ಷಕರ ಮಹಾಸಭೆಯಲ್ಲಿ ಪೋಷಕರ ಹಾಗೂ ಜನಪ್ರತಿನಿಧಿಗಳ ಪರಿಚಾಯತ್ಮಕ ಕಾರ್ಯಕ್ರಮ ವಿಶಿಷ್ಟವಾಗಿ ನಡೆಯಿತು.ನಂತರ ಪೋಷಕರ-ಶಿಕ್ಷಕರ ಮಹಾಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು,ಸರ್ಕಾರದ ಪ್ರೋತ್ಸಾಹದಾಯಕ ಯೋಜನೆಗಳು,LNB,FLN ಬಗ್ಗೆ,ಮಕ್ಕಳ ಶೈಕ್ಷಣಿಕ ಚಟುವಟಿಕೆಯಲ್ಲಿ ಪೋಷಕರ ಜವಾಬ್ದಾರಿ ಬಗ್ಗೆ,ಶಾಲೆಯಲ್ಲಿನ ಭೌತಿಕ ಸೌಲಭ್ಯಗಳ ಕುರಿತು,2026-27 ಶೈಕ್ಷಣಿಕ ವರ್ಷದಲ್ಲಿ ದಾಖಲಾತಿ ಹೆಚ್ಚಳ,ಮಕ್ಕಳ ಹಕ್ಕುಗಳು,ಮಕ್ಕಳ ರಕ್ಷಣಾ ನೀತಿ,POCSO ಕಾಯ್ದೆ,RTI ಬಗ್ಗೆ ಮಾಹಿತಿ,ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದ ಇನ್ನಿತರ ವಿಷಯಗಳು ಚರ್ಚೆಯಾದವು.ಈ ಬಗ್ಗೆ ಹೆಚ್ಚಿನ ಮಾಹಿತಿಯ ವಿವರವನ್ನು ಸಹ ಶಿಕ್ಷಕರಾದ ಮಂಜುನಾಥ ಕೂಟಬಾಗಿ ನೀಡಿದರು.
ಶಾಲಾ ಎಸ್.ಡಿ.ಎಮ್.ಸಿ ಸಮಿತಿಯವರು,ಪಾಲಕರು,ಪೋಷಕರು, ಶಿಕ್ಷಕರು, ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆಯಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು,ಮಕ್ಕಳಿಗೂ ಸ್ಪರ್ಧೆಗಳು ನಡೆದವು.ಸ್ಪರ್ಧೆಯಲ್ಲಿ ವಿಜೇತ ಪೋಷಕರಿಗೆ, ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ನಿವೃತ್ತ ಶಿಕ್ಷಕಿ ಶಕುಂತಲಾ ಕುಡ್ತರಕರರವರ ಉಪಸ್ಥಿತಿ ಕಾರ್ಯಕ್ರಮಕ್ಕೆ ಶೋಭೆಯನ್ನು ತಂದು ಕೊಟ್ಟಿತು. ಈ ಸಭೆಯು ಶಾಲಾ ಪರಿಸರದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಿತ್ತು. ಶಾಲಾ ಆಡಳಿತ ಮಂಡಳಿಯವರ, ಪಾಲಕರ, ಪೋಷಕರ ಸಹಯೋಗದಲ್ಲಿ ಶಿಕ್ಷಕರು ಅಡುಗೆ ತಯಾರಕರ ಮೂಲಕ ಎಲ್ಲರಿಗೂ ಉತ್ತಮ ಶುಚಿ,ರುಚಿ ಭೋಜನದ ವ್ಯವಸ್ಥೆ ಮಾಡಿಸಿದ್ಡರು.
ಕಳೆದ ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆಯ ಪುಷ್ಠಿ ಯೋಜನೆಯಡಿ ಜೋಯಿಡಾ ತಾಲೂಕಿನ ಅತ್ತ್ಯುತ್ತಮ ಎಸ್. ಡಿ.ಎಮ್.ಸಿ ಎಂಬ ಪ್ರಶಸ್ತಿ ಪಡೆದಿರುವ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷೆ,ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಎಲ್ಲಾ ಚಟುವಟಿಕೆಯಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಶಾಲೆಯ ಸಹ ಶಿಕ್ಷಕಿಯಾದ ನಾಗರತ್ನಾ ಮೋಗೇರ ಧನ್ಯವಾದಗಳನ್ನು ಸಲ್ಲಿಸಿದರು.ಸಹ ಶಿಕ್ಷಕಿಯರಾದ ಅನಿಸ್ ಪಾತೀಮಾ,ಸಂಜನಾ ಮಿರಾಶಿ ಸಹಕಾರ ನೀಡಿದರು.ರಾಮನಗರ ಕ್ಲಸ್ಟರಿನ ಕ್ರಿಯಾಶೀಲ ಸಿ.ಆರ್.ಪಿ ಗಳು,ಹನುಮಾನಲೇನ್ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಬಿ.ಹೆಚ್. ಬಾಗವಾನ ಅನಿವಾರ್ಯ ಕಾರಣಗಳಿಂದ ಅನುಪಸ್ಥಿತಿಯಲ್ಲಿದ್ದ ಕಾರಣ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ, ಸಹ ಶಿಕ್ಷಕ ವೃಂದದವರಿಗೆ, ಪಾಲಕ,ಪೋಷಕರಿಗೆ ಹೃದಯ ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
