ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಅವುರ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ತಾಲೂಕಾ ಆಡಳಿತದ ಮಾರ್ಗದರ್ಶನದಂತೆ ಸ್ವಚ್ಛತೆಯ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸೋಮಣ್ಣಾ ವೇಳಿಪ, ಅವುರ್ಲಿಯ ಪರಿಸರ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಘವೇಂದ್ರ ನಾಯ್ಕ,ಶಾಲೆಯ ಶಿಕ್ಷಕ ವೃಂದದವರು,ಅಂಗನವಾಡಿ ಕಾರ್ಯಕರ್ತೆ,ಸಹಾಯಕಿ,ಆಶಾ ಕಾರ್ಯಕರ್ತೆ,ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಪಾಲಕರು, ಪೋಷಕರು, ಗ್ರಾಮಸ್ಥರು,ಮಕ್ಕಳು ಭಾಗವಹಿಸಿದ್ದರು.
