ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಕುಂಬಾರವಾಡಾ ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೋರ್ವ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಶುಭಂ ಜಳಕಟ್ಟಿ ಎಂಬ ಯುವಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಜಖಂಗೊಂಡಿದೆ.
ವಿಷಯ ತಿಳಿಯುತ್ತಿದ್ದಂತೆ ಜೋಯಿಡಾ ಪೊಲೀಸ್ ಉಪನಿರೀಕ್ಷಕರಾದ (ಪಿಎಸ್ಐ) ಜಗದೀಶ್ ನಾಯ್ಕ ಅವರು ಸಿಬ್ಬಂದಿಯೊಂದಿಗೆ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗಾಯಾಳನ್ನು ತಕ್ಷಣ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೋಯಿಡಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
