ಸುದ್ದಿ ಕನ್ನಡ ವಾರ್ತೆ
. ಜೋಯಿಡಾ:ತಾಲೂಕಿನ ಗಾಂಗೋಡಾ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಪ್ರವೀಣ ದೇಸಾಯಿ,ಉಪಾಧ್ಯಕ್ಷೆ ನೀತಾ ಜಿ,ಸದಸ್ಯರಾದ ಸುಬ್ರಾಯ ಹೆಗಡೆ,ಲಕ್ಷ್ಮೀ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ನಬೀಲಾಲ್,ಕಾರ್ಯದರ್ಶಿ ದೇವಾನಂದ ದೇಸಾಯಿ,ಗ್ರಾಮ ಪಂಚಾಯತ ಸಿಬ್ಬಂದಿಗಳಾದ ಮಧುಕರ,ಪೂಜಾ,ದಿವ್ಯಾ,ರಮೇಶ,ಸಂಜು,ಮೋಹನರವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ನಂತರ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಲು ಹಾಗೂ ಮೂಲ ಆಶಯಗಳನ್ನು ಅರಿಯಲು ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದಲಾಯಿತು.
