ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನಲ್ಲಿ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪೋಲಿಸ್ ವಸತಿ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ಸಹಯೋಗದಲ್ಲಿ 3.ಕೋಟಿ 76 ಲಕ್ಷ ವೆಚ್ಚದಲ್ಲಿ 12 ಪೋಲಿಸ್ ಸಿಬ್ಬಂದಿಗಳ ವಸತಿ ಗೃಹಗಳ ಕಟ್ಟಡ ನಿರ್ಮಾಣದ ಅಡಿಗಲ್ಲು ಕಾರ್ಯಕ್ರಮಕ್ಕೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಜೋಯಿಡಾ ಶಾಸಕ ಆರ್ ವಿ ದೇಶಪಾಂಡೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪೋಲಿಸರ ಕೆಲಸಕ್ಕೆ ಯಾವುದೇ ಸಮಯ ಇಲ್ಲ, ಭಾರತದ ಗಡಿ ಕಾಯುವವರು ಸೈನಿಕರು, ಆದರೆ ನಮ್ಮನ್ನು ಕಾಯುವವರು ಪೋಲಿಸರು, ಹಗಲು ರಾತ್ರಿ ನಮ್ಮ ಸೇವೆಗೆ ಪೋಲಿಸ್ ಇಲಾಖೆ ಇದೆ, ಜೋಯಿಡಾದಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ವಸತಿ ಗೃಹಗಳು ಆಗುತ್ತಿರುವುದು ಸಂತಸದ ಸಂಗತಿ ಎಂದರು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ದೀಪನ್ ಎನ್ ಮಾತನಾಡಿ ಜೋಯಿಡಾದಲ್ಲಿ ಕೆಲಸ ಮಾಡುವ ಪೋಲಿಸರಿಗೆ ವಸತಿ ಸಮಸ್ಯೆ ಇತ್ತು, ಮುಂದೆ ಹೊಸ ವಸತಿ ಗೃಹಗಳಿಂದ ನಮ್ಮ ಸಿಬ್ಬಂದಿಗಳಿಗೆ ಅನುಕೂಲವಾಗಿದೆ ಸರ್ಕಾರಕ್ಕೆ ಧನ್ಯವಾದಗಳು ಎಂದರು.
ಈ ಸಂದರ್ಭದಲ್ಲಿ ದಾಂಡೇಲಿ ಡಿ.ವೈ ಎಸ್ ಪಿ ಶಿವಾನಂದ ಮದರಖಂಡಿ, ಜೋಯಿಡಾ ಸಿಪಿಐ ಚಂದ್ರಶೇಖರ ಹರಿಹರ, ಜೋಯಿಡಾ ಪಿ.ಎಸ್ ಐ ಮಹೇಶ ಮಾಳಿ,ಜೋಯಿಡಾ ಗ್ರಾಮ ಪಂಚಾಯತ ಅಧ್ಯಕ್ಷೆ ಚಂದ್ರಿಮಾ ಮಿರಾಶಿ,ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್ ಭಾರತಿ ಮೇಡಂ,ಕೆಪಿಸಿಸಿ ಸದಸ್ಯ ಸದಾನಂದ ದಬ್ದಾರ, ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಮಾರುತಿ ಗಾವಡೆ, ಮಾಜಿ ಜಿ.ಪಂ ಸದಸ್ಯ ಸಂಜಯ ಹಣಬರ,ಗ್ರಾಮ ಪಂಚಾಯತಗಳ ಅಧ್ಯಕ್ಷರು,ಪ್ರಮುಖ ಪದಾಧಿಕಾರಿಗಳು,ಕಾರ್ಯಕರ್ತರು,ಸಾರ್ವಜನಿಕರು ಉಪಸ್ಥಿತರಿದ್ದರು.
